Saturday, January 17, 2009

ಯಾವ ಮೋಹನ ಮುರಳಿ ಕರೆಯಿತು...!?


ಇನ್ನೂ ಅದೆಷ್ಟು ಸಾವುಗಳನ್ನು ನೋಡಬೇಕೋ ನಾವು..!
ಆಗ ಪೂರ್ಣಚಂದ್ರ ತೇಜಸ್ವಿ. ಈಗ ನೆಚ್ಚಿನ ಗಾಯಕ ರಾಜು ಅನಂತಸ್ವಾಮಿ. ದಿಗಿಲಾಗುತ್ತದೆ. ಇನ್ನು ಬಾಳಿ ಬದುಕುವ
ವಯಸ್ಸಿರುವವರನ್ನು ಜವರಾಯ ತನ್ನ ಬಳಿಗೆ ಕರೆದುಕೊಳ್ಳುತ್ತಾನೆ ಎಂದರೆ ಏನರ್ಥ?! ತಪ್ಪು ನಮ್ಮದೋ, ಜವರಾಯನದೋ? ಸಾವು ಮಾತ್ರ ಯಾರನ್ನೂ ಬಿಟ್ಟಿಲ್ಲ; ಬಿಡುವುದೂ ಇಲ್ಲ.


ಹಾಡುವಾಗಲಾಗಲೀ, ಮಾತನಾಡುವಾಗಲಾಗಲೀ, ಕುಡಿಯುವಾಗಲಾಗಲೀ ಸದಾ ನಗುತ್ತಿದ್ದ ಪ್ರೀತಿಯ ರಾಜು,
ಜೀವನ- ಗಾಯನ ಮುಗಿಸಿದ್ದಾರೆ. ನಟನೆ ಗೊತ್ತಿತ್ತು. ಗಾಯನ ಗೊತ್ತಿತ್ತು. ಎಂತಹ ಹಾಡುಗಳನ್ನು ಬೇಕಾದರೂ ಹಾಡುವ ಸಾಮರ್ಥ್ಯವಿದ್ದ ರಾಜು, ಸುಗಮ ಸಂಗೀತವನ್ನು ಬೆಳೆಸಲು ಶ್ರಮಿಸುತ್ತಿದ್ದರು. ತಂದೆ ಮೈಸೂರು ಅನಂತಸ್ವಾಮಿ
ಪ್ರೇರಣೆಯಲ್ಲಿಯೇ ಕಾಯಕ ನಿರ್ವಹಿಸುತ್ತಿದ್ದ ರಾಜು ಇನ್ನು ನೆನಪು ಮಾತ್ರ ಎಂಬುದನ್ನು ನೆನೆಸಿಕೊಂಡರೆ....
------------
ಸುಗಮ ಸಂಗೀತ ಶಾಲೆ ಈಗ ಅನಾಥ!
ತಂದೆ ಮೈಸೂರು ಅನಂತಸ್ವಾಮಿಯವರ ಸ್ಮರಣಾರ್ಥ ತೆರೆದಿದ್ದ ಸುಗಮ ಸಂಗೀತ ಶಾಲೆ ಕೂಸಿನಲ್ಲಿಯೇ ಅನಾಥವಾಗಿದೆ. ಸ್ಥಾಪಕನನ್ನು ಕಳೆದುಕಂಡ ದುಃಖದಲ್ಲಿದೆ. ೧೫-೨೦ ವರ್ಷಗಳ ಕಾಲ ಸುಗಮ ಸಂಗೀತ ಕ್ಷತ್ರದಲ್ಲಿ ಗಾಯಕ, ನಿರ್ದೇಶಕ, ಸಂಗೀತ ಸಂಯೋಕರಾಗಿ ಮಾತ್ರವಲ್ಲದ, ಚಲನಚಿತ್ರಗಳಲ್ಲಿ ಹಾಸ್ಯನಟರಾಗಿಯೂ ಖ್ಯಾತಿ ಗಳಿಸಿದ್ದು ರಾಜು ಅನಂತಸ್ವಾಮಿ ಮೈಸೂರಿನ ವಿದ್ಯಾರಣ್ಯಪುರಂನಲ್ಲಿರುವ ನಾದಬ್ರಹ್ಮ ಸಂಗೀತ ಸಭಾದಲ್ಲಿ ಸುಗಮ ಸಂಗೀತ ಕಲಿಕಾ ತರಗತಿಗಳನ್ನು ಆರಂಭಿಸಿದ್ದರು. ಇದು ೨೦೦೭ರ ಮೇ ೧೯ ರಿಂದ ಆರಂಭವಾಗಿತ್ತು. ಸುಗಮ ಸಂಗೀತದ ಆಸಕ್ತಿ ಇರುವ
ಮಕ್ಕಳಿಗೆ ಖುದ್ದು ರಾಜುವೇ ಪಾಠ ಹೇಳುತ್ತಿದ್ದರು. ಇದರೊಂದಿಗೆ ಒಂದಷ್ಟು ಮಕ್ಕಳಿಗೆ ನಗುವ ಗುರುವಿನ ಸಾಂಗತ್ಯ ಸಿಕ್ಕಿತ್ತು. ಆದರೆ, ಒಂದಷ್ಟು ಮಕ್ಕಳಿಗೆ ಈ ಅವಕಾಶ ಲಭ್ಯವಾಗದಂತೆ ದೇವರೇ ಆಜ್ಞೆ ಹೊರಡಿಸಿದ್ದಾನೆ!
ಮಾತು ತಪ್ಪೆಲ್ಲ ಎಂದಿದ್ದರು...
ಅತಿಯಾದ ಮದ್ಯಪಾನದಿಂದಲೋ ಏನೋ ಆಗಾಗ ಆರೋಗ್ಯ ಕೈಕೊಡುತ್ತಿದ್ದುದರಿಂದ ಈ ಶಾಲೆ ಆರಂಭವೂ ವಿಳಂಬವಾಗಿತ್ತು. ೨೦೦೭ರ ಜನವರಿಯಲ್ಲಿ ಆರಂಭವಾಗಬೇಕಿದ್ದ ಶಾಲೆ, ಮೇನಲ್ಲಿ ಪ್ರಾರಂಭವಾಗಿತ್ತು. ಯಾವುದೇ ಸಮಾರಂಭ ಮಾಡದೇ, ಸರಳವಾಗಿ ಸರಸ್ವತಿ ಪೂಜೆ ಮಾಡಿ ಮುಗಿಸಿ, ಉದ್ಘಾಟನೆ ಮಾಡುವ ಮೂಲಕ ರಾಜು ಸರಳತೆಯನ್ನು ಪ್ರದರ್ಶಿಸಿದ್ದರು. ವದಲು ಅನಾರೋಗ್ಯದಿಂದಾಗಿ ಶಾಲೆ ಆರಂಭಿಸುವುದು ಸಾಧ್ಯವಾಗಿರಲಿಲ್ಲ. ಈ ಬಾರಿ ಮಾತು ತಪ್ಪೆಲ್ಲ ಎಂದಿದ್ದ ರಾಜು, ಮಾತು ಉಳಿಸಿಕಂಡಿದ್ದರು. ಈಗ ಅದೆಲ್ಲವನ್ನು ಬಿಟ್ಟಿದ್ದೇನೆ. ಇನ್ನು ಮುಂದೆ ಸಂಗೀತವಾಯಿತು; ನಾನಾಯಿತು ಎಂದು ಹೇಳಿದ್ದರಾದರೂ, ಹಾಗನು ಅವರು ನಡೆದುಕೊಳ್ಳಲಿಲ್ಲ. ಮದ್ಯಪಾನ ಅವರನ್ನು ಆವರಿಸಿತ್ತು. (ರಾಜು ಸಾವು ನಮ್ಮ ವಯಸ್ಸಿನಲ್ಲಿರುವ ಮದ್ಯಪ್ರಿಯರಿಗೆ ಪಾಠವೂ ಹೌದು!.)


೨೦೦೭ ರ ಏ.೩೦ ರಂದು ಮೈಸೂರಿನ ಪತ್ರಕರ್ತರ ಭವನದಲ್ಲಿ ತಮ್ಮ ಶಾಲೆ ಆರಂಭದ ಬಗ್ಗೆ ಸುದ್ದಿಗೋಷ್ಠಿಗೆ ರಾಜು ಬಂದಿದ್ದರು. ಅಂದು ನಮ್ಮೆಲ್ಲರ ಒತ್ತಾಯದ ಮೇರೆಗೆ ಅಮೆರಿಕ ಅಮೆರಿಕ ಚಿತ್ರದ ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನೂ ಹಾಡು ಹಾಡಿದ್ದರು. ತಮ್ಮ ಹಾಡಿನ ಭಾಗವನ್ನು ಮಾತ್ರ ಹಾಡಿದ್ದ ರಾಜು, ಉಳಿದದ್ದನ್ನು ಸಂಗೀತಾ ಕಟ್ಟಿ ಬಂದಾಗ ಅವರಿಂದ ಹೇಳಿಸಿ ಎಂದು ಹೇಳಿ ನಗೆತರಿಸಿದ್ದರು!
ಆದರೆ ಈಗ ಬಯಸಿದರೂ ರಾಜು ಹಾಡುವುದಿಲ್ಲ.... ಈಗಾಗಲೇ ಹಾಡಿರುವ ಹಾಡುಗಳನ್ನು ಕೇಳಿಯೇ ಸಂತೋಷ ಪಡಬೇಕು ನಾವು. ರಾಜು... ಯಾವ ಮೋಹನ ಮುರಳಿ ಕರೆಯಿತು ದೂರು ತೀರಕೆ ನಿನ್ನನು....?

5 comments:

ಗೋವಿಂದ್ರಾಜ್ said...

Mysoorun Anantha Swamy Raaju nidhanakke bareda lekhana nija nudi namana. Raaju Haaduttaarendare odi hogi keluva tavaka iruttittu. Tanna jeevakke, arividdoo taane kuttu tandukondaddu duranta. Raaju atmakke shanti sigali...

ಪ್ರಸಾದ್ ಟಿ ಎಂ said...

ಸುಗಮ ಸಂಗೀತ ಒಂದು ಸ್ವರವನ್ನ ಕಳೆದುಕೊಂಡು ರಾಗ ಇ೦ಪಿಲ್ಲದ೦ತಾಗಿದೆ... ನಿನ್ನ್ನ ಮಾತು ನಿಜ ಮಹೇಶ, ಈ ಸಾವು ಮದ್ಯಪ್ರಿಯರಿಗೆ ಒಂದು ದೊಡ್ಡ ಪಾಠ. ರಾಜು ಆತ್ಮಕ್ಕೆ ಶಾಂತಿ ಸಿಗಲಿ...

ಎಂ. ಮಹೇಶ್ ಭಗೀರಥ said...

vandanegalu mestre, prasad

Unknown said...

rajuravara alivu nammali ulisiruvude aparavaagide.avara kaleya aaradakaraagi munnadeyabeku matyaavudo ariyada thirake.......

Hari said...

ಭೂಮಿ ತಬ್ಬಿದ್ ಮೋಡಿದ್ದಂಗೆ...
ಬೆಳ್ಳಿ ಬಳ್ದಿದ್ ರೋಡಿದ್ದಂಗೆ......
ಸಾಪಗಳ್ಳ ತಿಟ್ಟಿಲ್ದಂಗೆ
ಮಡಿಕೇರಿ ಮೇಲ್ಮಂಜು.......

ಇನ್ನೆಲ್ಲಿ ಆ ದನಿಯೊಡೆಯ????


--ಹರಿ